175
ಶಿವಮೊಗ್ಗ ,ಸಾಗರ: ಬೆಂಗಳೂರಿನಿಂದ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಶಿವಮೊಗ್ಗದ ಚೋರಡಿ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಆರು ಮಂದಿ ಒಂದೇ ಕಾರಿನಲ್ಲಿ ಬೆಂಗಳೂರಿನಿಂದ ಸಿಗಂದೂರು ಕಡೆ ಪ್ರಯಾಣಿಸುತ್ತಿದ್ದರು. ಚೋರಡಿ ಬ್ರಿಡ್ಜ್ ಸಮೀಪ ರಸ್ತೆ ಬದಿಯ ಡಿವೈಡರ್ಗೆ ಕಾರು ಡಿಕ್ಕಿಯಾಗಿ, ನಿಯಂತ್ರಣ ಕಳೆದುಕೊಂಡು ಮೂರು ಬಾರಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

