Home Uncategorized ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

by Mahesh malenaadu

ಶಿವಮೊಗ್ಗ: ಮಳೆಹಾನಿಗೊಳಗಾದ ಸಾಗರ ನಗರದ ವಿವಿಧ ಪ್ರದೇಶಗಳಲ್ಲಿ ಶಾಸಕರಾದ ಬೇಳೂರು ಗೋಪಾಲ ಕೃಷ್ಣ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಮನೆ ಕಳೆದುಕೊಂಡ ಬಡ ಕುಟುಂಬಗಳಿಗೆ ಸರ್ಕಾರದ ಪರಿಹಾರ ಚೆಕ್ ವಿತರಣೆ ಮಾಡಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಹಾನಿಯಾಗಿದೆ ಎಂದು ಮನೆ ಕುಸಿದು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಾಂತ್ವನ ಹೇಳಿದ ರು, ತಾಲೂಕು ಆಡಳಿತದ ಮೂಲಕ ತಕ್ಷಣದ ಸ್ಪಂದನೆ ನೀಡಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂಪೂರ್ಣ ಮನೆ ಹಾನಿಗೆ ₹1 ಲಕ್ಷ ಹಾಗೂ ಭಾಗಶಃ ಹಾನಿಗೆ ಅಂದಾಜು ಮೊತ್ತದ ಪರಿಹಾರ ನೀಡಲಾಗುವುದು, ಅಲ್ಲದೆ ಸಂತ್ರಸ್ತರಿಗೆ ವೈಯಕ್ತಿಕವಾಗಿಯೂ ಕೂಡ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ
ಹಬ್ಬದ ಸಂದರ್ಭದಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Spread the love

You may also like

Leave a Comment