15
ಶಿವಮೊಗ್ಗ: 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ನೆಹರು ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಧ್ವಜಾರೋಹಣದ ಕಾರ್ಯಕ್ರಮದೊಂದಿಗೆ ನೆರವೇರಿಸಲಾಯಿತು.
ರಾಷ್ಟ್ರಧ್ವಜ ಹಾರಿಸಿ, ಧ್ವಜವಂದನೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ನೆಹರು ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿದರು,
ನಂತರ ಸಶಸ್ತ್ರ ಪಡೆಗಳು ಹಾಗೂ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದ,
ಸಚಿವ ಮಧುಬಂಗಾರಪ್ಪ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ದಿನೋತ್ಸವದ ಶುಭಾಶಯ ಕೋರಿ ಸಂದೇಶ ನೀಡಿದರು.
ತ್ಯಾಗ-ಬಲಿದಾನ ನೀಡಿದ ದೇಶದ ಮಹಾನ್ ನಾಯಕರನ್ನು ಜಿಲ್ಲಾ ಉಸ್ತುವಾರಿ ಸಚಿವರು ಸ್ಮರಿಸಿದರು,
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಸಾರ್ವಜನಿಕರು ಹಾಗೂ ಸುಮಾರು 18 ಸಾವಿರ ವಿದ್ಯಾರ್ಥಿಗಳಿಂದ ನೆಹರು ಕ್ರೀಡಾಂಗಣ ಭರ್ತಿಯಾಗಿತ್ತು,
ವಿದ್ಯಾರ್ಥಿಗಳ ದೇಶಭಕ್ತಿಯ ನೃತ್ಯ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದಿತ್ತು.

