ಶಿವಮೊಗ್ಗ ನಗರದ KSRTC ಬಸ್ ಸ್ಟ್ಯಾಂಡಿನ ಶೌಚಾಲಯದಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾಗಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಶೌಚಾಲಯವನ್ನು ಸ್ವಚ್ಚಗೊಳಿಸಲು ಬೆಳಗ್ಗೆ ಸಿಬ್ಬಂದಿಗಳು ಸೌಚಾಲಯದಬಳಿ ತೆರಳಿದಾಗ ವ್ಯಕ್ತಿಯೊಬ್ಬ ತನ್ನ ಪ್ಯಾಂಟ್ ನಿಂದ ಶೌಚಾಲಯದ ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡ ಸ್ತಿಯಲ್ಲಿರುವುದು ಕಂಡು ಬಂದಿದೆ.
ಕೂಡಲೆ ಸಿಬ್ಬಂದಿಗಳು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ದೊಡ್ಡ ಪೇಟೆ ಠಾಣಾ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.
ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿಯ ಮರಿಸ್ವಾಮಿ ಹೆಚ್.ಎಮ್ ಎಂದು ಗುರುತಿಸಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷಾಕೇಂದ್ರಕ್ಕೆ ರವಾನಿಸಲಾಗಿದೆ.
ಬೆಳಿಗ್ಗೆ ಶೌಚಾಲಯ ಕ್ಲೀನಿಂಗ್ ಗೆ ಸಿಬ್ಬಂದಿ ಮುಂದಾದಾಗ ಘಟನೆ ಬೆಳಕಿಗೆ
ತನ್ನ ಪ್ಯಾಂಟ್ ಬಳಸಿ ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡಿರುವ ವ್ಯಕ್ತಿ
ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ
ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನೆ
ಹೆಚ್ಚಿನ ಮಾಹಿತಿ ತನಿಖೆ ಬಳಿಕವೇ ಸಿಗಬೇಕಿದೆ
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

